ಹಾಸನ: ಶಾಲೆಗೆ ಹೊರಟಿದ್ದ ಶಿಕ್ಷಕಿಯೊಬ್ಬರನ್ನು ಸಿನಿಮಾ ಸ್ಟೈಲಿನಲ್ಲಿ ಅಪಹರಿಸಿದ (School teacher Kidnap) ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ. ಮದುವೆಗೆ ಒಪ್ಪದ ಕಾರಣಕ್ಕಾಗಿ (kidnapped for not obliging Marriage) ದ್ವೇಷದಿಂದ ಯುವತಿಯನ್ನು ಅಪಹರಿಸಲಾಗಿದೆ ಎಂದು ಹೇಳಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದೆ. ಅರ್ಪಿತಾ ಎಂಬ ಶಿಕ್ಷಕಿಯನ್ನು ರಾಮು ಮತ್ತು ಆತನ ಪೋಷಕರು ಸೇರಿ ಅಪಹರಣ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮದುವೆ ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನೇ ದುರುಳರು ಅಪಹರಿಸಿದ್ದಾರೆ ಎಂದು…
ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಇದನ್ನೂ ಓದಿ: ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ! ಹೊಸ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತಿದ್ದ ಡೀಲರ್ಗಳಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಇದರ…
ಕಠ್ಮಂಡು: ನೇಪಾಳದ (Nepal) ಸುಪ್ರೀಂ ಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ ವಿವಾಹವನ್ನು ನೋಂದಾಯಿಸಿದ ಮೊದಲ ದೇಶವಾಗಿ ನೇಪಾಳ ಹೊರಹೊಮ್ಮಿದೆ. ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾದರು. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ ಎಂದು ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್…
ಉಡುಪಿ, ನ 30: ವಿದೇಶದಲ್ಲಿ ಉದ್ಯೋಗ ಮಾಡಿ ಕೊಡುವ ಆಸೆ ತೋರಿಸಿ ವಿಸಾ ಮಾಡಿ ಕೊಡಲು ಲಕ್ಷಾಂತರ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 1ನೇ ಆರೋಪಿ ಎಂದು ಗುರುತಿಸಲಾಗಿರುವ ಕೆಳಾರ್ಕಳಬೆಟ್ಟು ಗ್ರಾಮ ನೇಜಾರು ಓಡ್ರಿನ್ ಡಿಸೋಜಾ ಮತ್ತು 2ನೇ ಆರೋಪಿಯಾಗಿರುವ ಆಂದ್ರ ಪ್ರದೇಶ ಮೂಲದ ರಾಜು ಕೈ ಎಂಬವರ ವಿರುದ್ಧ ತೋನ್ಸೆ ಕಲ್ಯಾಣಪುರ ನಿವಾಸಿಯಾಗಿರುವ ರಾಯ್ಸನ್ ಅಂಟೋನಿ ಬರೆಟ್ಟೊ ದೂರು ದಾಖಲು ಮಾಡಿದ್ದಾರೆ….
ಬ್ರಹ್ಮಾವರ ನವೆಂಬರ್ 29: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ನಡೆದಿದೆ. ಇದನ್ನೂ ಓದಿ: ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ! ಮೃತರನ್ನು ಪ್ರೀತಮ್ ಅಂತೋನಿ ಡಿಸಿಲ್ವ (30) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಡಿಗೆ ಬೈಕ್ ಸಮೇತ…