ಮಂಗಳೂರು, ಜ 27: ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ
ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement) ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…
ಹರಿಯಾಣ, ಜ 27: ದೆಹಲಿಯ ಉನ್ನತ ಅಧಿಕಾರಿ ಪುತ್ರನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನೆಪತ್ ನಲ್ಲಿ ನಡೆದಿದೆ. ವಕೀಲರಾದ ಲಕ್ಷ್ಯ ಚೌಹಾಣ್ ಅವರು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರ. ಲಕ್ಷ್ಯ ಅವರ ಇಬ್ಬರು ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಹಾಗೂ ಅಭಿಷೇಕ್ ಎಂಬುವವರು ಅವರನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದರು. ಲಕ್ಷ್ಯ ಅವರ ಹತ್ಯೆಗೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ….
ಮಂಗಳೂರು, ಜನವರಿ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 100ಕ್ಕೂ ಹೆಚ್ಚು ಮುಜರಾಯಿಯೇತರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ದೇವಾಲಯಗಳ ವಿಶ್ವಸ್ಥರು ಒಪ್ಪಿದ್ದಾರೆ. ಹಂತ ಹಂತವಾಗಿ ಜಾರಿಗೊಳಿಸಲಾಗುವುದು’ ಎಂದು ಕರ್ನಾಟಕ ದೇವಸ್ಥಾನ– ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಮೋಹನ ಗೌಡ ಹೇಳಿದರು. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ….
ಬಂಟ್ವಾಳ,ಜ 27: ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ.23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್ ಶೆಟ್ಟಿ ಎಂಬವರ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ…
ಕಾರ್ಕಳ ಜನವರಿ 26: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಮರಿಯಾ ಫೆರ್ನಾಡಿಸ್ (53ವ) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಮಂಗಳೂರು ಕಡೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಾಡಿಗೆ ಕಾರು ಹಾಗೂ ನಿಟ್ಟೆ ಕಡೆಯಿಂದ ಪಡುಬಿದ್ರೆ ಕಡೆಯತ್ತ ಬರುತ್ತಿದ್ದ ಕಾರುಗಳ ನಡುವೆ ಕಾರ್ಕಳ ಪಡುಬಿದ್ರೆ ಹೆದ್ದಾರಿಯ ಮಾವಿನಕಟ್ಟೆ…