ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಹೊರದೇಶದಲ್ಲಿ ಕೆಲಸದಲ್ಲಿದ್ದು ಊರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿರುವ ಗಿಲ್ಬರ್ಟ್ ಕಾರ್ಲೊ (78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೊ (70) ಸಾವನ್ನಪ್ಪಿದ ದಂಪತಿ. ಕಳೆದ ಒಂದೂವರೆ ವರ್ಷಗಳ ಹಿಂದೆ ಅವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ ನಡೆದಿತ್ತು. ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಹೆಣ್ಣುಮಕ್ಕಳು. ಇವರಲ್ಲಿ ಇಬ್ಬರು…
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission Of India) 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024 ರಲ್ಲಿ ಅವರ ನಿವೃತ್ತಿಯ ಮೇಲೆ ಮುಕ್ತಾಯಗೊಳ್ಳಲಿದೆ. ಕರ್ನಾಟಕ ಸೇರಿ ಒಟ್ಟು 13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್ 2ರಂದು ಮುಗಿಯಲಿದ್ದರೆ, ಎರಡು ರಾಜ್ಯಗಳ ಉಳಿದ ಆರು ಸದಸ್ಯರು…
ಬೆಳಗಾವಿ,ಜ 29: ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು,ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಉಡುಪಿ ಮೂಲದ ಕಮಲಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು ಅನ್ನುವ ಮಾಹಿತಿ ಲಭ್ಯವಾಗಿದೆ. ರವಿವಾರ…
ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ (Vijayapura) ಭೂಕಂಪನದ (Earthquake) ಅನುಭವ ಆಗಿದೆ. ಭಾನುವಾರ ತಡರಾತ್ರಿ ಎರಡು ಬಾರಿ ಭೂಕಂಪನ ಸಂಭವಿಸಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ವಿಜಯಪುರ ನಗರ ಮತ್ತು ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿಯಲ್ಲಿ ಭೂಮಿ ಕಂಪಿಸಿದೆ. ಭಾನುವಾರ ರಾತ್ರಿ 12:22 ಹಾಗೂ ರಾತ್ರಿ 1:20ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. 2.9 ತೀವ್ರತೆಯಲ್ಲಿ ಭೂಕಂಪನ ಆಗಿದ್ದು, ಭೂಮಿಯ 5 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಆ್ಯಪ್ಗಳಲ್ಲೂ ಭೂಕಂಪನ…
ಬೆಳ್ತಂಗಡಿ ಜನವರಿ 28: ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ ವರ್ಗಿಸ್ (68),ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ…