![ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ](https://nimmondige24.com/wp-content/uploads/2023/12/50.jpg)
ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಬಳಿ ಇರುವ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿದೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ
ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು.
ಇದನ್ನೂ ಓದಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ…!
ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ಇನ್ನಷ್ಟೇ ತಿಳಿಯಬೇಕಿದೆ.