Breaking News

ಪಡೀಲ್ ಅಂಡರ್ ಪಾಸ್ ನಲ್ಲಿ ಅಪಘಾತ ; ಓರ್ವ ಮೃತ್ಯು – ಇಬ್ಬರು ಗಂಭೀರ!

Share News

ಮಂಗಳೂರು :ಮಂಗಳೂರು ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು,: ಮಂಗಳೂರು ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಗಾಡ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ನಲ್ಲಿ ಮೂರು ಮಂದಿ ಸವಾರಿ ಮಾಡಿದ್ದು, ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಅಂಡರ್‌ಪಾಸ್‌ನ ಗೋಡೆಗೆ ಬೈಕ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. .

ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್‌ಗಳ ಕಳವು: ಸೊತ್ತು ಸಹಿತ ಓರ್ವನ ಬಂಧನ

ಮೂಡಬಿದ್ರೆ ಠಾಣಾ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳವು ಮಾಡಲಾಗಿದ್ದು, ಪ್ರಜರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ ಜಿ ರವರು ಮೇಲಿನ ಪ್ರಕರಣದಲ್ಲಿ ಕಳ್ಳತನ ಮಾಡಿದ ಒಂದನೇ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

 


Share News

Leave a Reply

Your email address will not be published. Required fields are marked *