Breaking News

ಬಂಟ್ವಾಳ : ಬೈಕ್ ಸ್ಕಿಡ್ ಆಗಿ ಬಿದ್ದು ನಾಟಕ ಕಲಾವಿದ ಸಾವು..!

Share News

ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ.

ಇದನ್ನೂ ಓದಿ: ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್; ಒರ್ವ ಸಿಬ್ಬಂದಿಗೆ ಗಾಯ

‌‌ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ. ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.

ಇದನ್ನೂ ಓದಿ: ಉಡುಪಿ: ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಮೃತ್ಯು

ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ. ‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *