![ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯು!](https://nimmondige24.com/wp-content/uploads/2023/09/219.jpg)
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ.
ಮೃತ ಯುವಕ ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್ ಎಂದು ತಿಳಿದುಬಂದಿದೆ.
ಮಂಗಳೂರು : ರಸ್ತೆಯಲ್ಲಿನ ಹೊಂಡ ಮುಚ್ಚಿ ಮಾದರಿಯಾದ ಟ್ರಾಫಿಕ್ ಪೊಲೀಸರು; ಸಾಮಾಜಿಕ ಕಳಕಳಿಗೆ ಎಲ್ಲೆಡೆ ಮೆಚ್ಚುಗೆ!
ಈತ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.