Breaking News

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಆಯತಪ್ಪಿ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ವ್ಯಕ್ತಿ ಸಾವು!

Share News

ಬೆಳ್ತಂಗಡಿ ಡಿಸೆಂಬರ್ 20: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…!

ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಕಟ್ಟಿಂಗ್ ಮೇಷಿನ್ ಜೊತೆ ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ ಕಾರಣ ಅದು ಅವರ ಕುತ್ತಿಗೆಗೆ ತಾಗಿದೆ.ಗಂಭೀರ ಗಾಯದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಸ್ಥಳೀಯ ಆಸ್ಪತೆಗೆ ದಾಖಲಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಾಸರಗೋಡು : ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದುವರೆ ವರ್ಷದ ಮಗು ಮೃತ್ಯು..!

ಸಹೋದರ ಪ್ರಮೋದ್ ಈ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *