Breaking News

ಬೆಳ್ತಂಗಡಿ: ಅಯೋಧ್ಯೆ ಪ್ರಾಣ ಪ್ರತಿಷ್ಠೆಯಂದು ಗಂಡು ಮಗುವಿಗೆ ಜನ್ಮ ನೀಡಿದ ತಾಯಿ; ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ

Share News

ಬೆಳ್ತಂಗಡಿ, ಜ 23: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನದಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ ಮಾಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬಸನಬೆಟ್ಟು ನಿವಾಸಿ ಪವಿತ್ರ ಎಂಬವರು ಗಂಡು ಮಗುವಿಗೆ ಜನ್ಮ ನೀಡಿದ್ದು, ನಿನ್ನೆ ಅಯೋಧ್ಯೆಯಲ್ಲಿ ರಾಮನ‌ ಪ್ರಾಣಪ್ರತಿಷ್ಠಾಪನೆಯ ದಿನದಂದೇ ಗಂಡು ಮಗುವಿಗೆ ಜನನವಾಗಿರುವುದರಿಂದ ಮಗುವಿಗೆ ಶ್ರೀರಾಮ ಎಂದು ಹೆಸರಿಡಲು ಯೋಚಿಸುತ್ತೇವೆ ಎಂದು ಮಗುವಿನ ತಂದೆ ತಿಳಿಸಿದ್ದಾರೆ.

ಇನ್ನು ಸುಳ್ಯದ ಸುರೇಶ್ ಮತ್ತು ಪಡಂಗಡಿಯ ಪವಿತ್ರ ದಂಪತಿಗೆ 6 ವರ್ಷದ ಹೆಣ್ಣು ಮಗು ಇದ್ದು, ಇದೀಗ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು


Share News

Leave a Reply

Your email address will not be published. Required fields are marked *