![ಬೆಳ್ತಂಗಡಿ :ಮರದ ಗೆಲ್ಲು ಬಿದ್ದು ಮಹಿಳೆ ಸಾವು](https://nimmondige24.com/wp-content/uploads/2023/10/25-2.jpg)
ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮಹಿಳೆಯ ತಲೆಯ ಮೇಲೆ ಬಿದ್ದು ಅವರು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯ ಸಂಜಯನಗರದಲ್ಲಿ ಅ. 7ರಂದು ನಡೆದಿದೆ.
ಇದನ್ನೂ ಓದಿ: Bangalore : ಪಟಾಕಿ ಅಂಗಡಿಗೆ ಬೆಂಕಿ – 13 ಕಾರ್ಮಿಕರು ಸಜೀವ ದಹನ
ಇಲ್ಲಿನ ಬೀಡಿ ಇಸ್ಮಾಯಿಲ್ ಅವರ ಪತ್ನಿ ಝೊಹರಾ (60) ಮೃತಪಟ್ಟವರು. ಇಸ್ಮಾಯಿಲ್ ಅವರು ಅನಾರೋಗ್ಯದ ಕಾರಣ ಶಸ್ತ್ರಚಿಕಿತ್ಸೆಗೊಳಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಂತೆ ಇತ್ತ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ
ತತ್ಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.