Breaking News

ಬೆಳ್ತಂಗಡಿ : ಕರಿಮಣಿ ಸರ ಕದ್ದ ಇಬ್ಬರು ಸರಗಳ್ಳಿಯರ ಬಂಧನ..!

Share News

ಬೆಳ್ತಂಗಡಿ, ಡಿ 21 : ಉದ್ಯೋಗಿಯೊಬ್ಬರು ಸರಕಾರಿ ಬಸ್‌ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತ ಆರೋಪಿಗಳು.

ಇದನ್ನೂ ಓದಿ: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…!

ಡಿ. 12ರಂದು ಸರಕಾರಿ ಉದ್ಯೋಗಿ ವಾರಿಜಾ ಅವರು ಧರಿಸಿದ್ದ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವು ಸರಕಾರಿ ಬಸ್‌ ಹತ್ತುವ ವೇಳೆ ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಾರಿಜಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ಅವರ್ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಡಿ. 20ರಂದು ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಕಾಸರಗೋಡು : ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದುವರೆ ವರ್ಷದ ಮಗು ಮೃತ್ಯು..!

ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *