Breaking News

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

Share News

ಬೆಳ್ತಂಗಡಿ, ಜ 22: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ.

ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಇನ್ನು ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಮಾಡಿದ್ದ ವ್ಯಕ್ತಿಯ ಬಂಧನ


Share News

Leave a Reply

Your email address will not be published. Required fields are marked *