Breaking News

State News

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹಾಸನ/ಚಿಕ್ಕಮಗಳೂರು/ಮಂಡ್ಯ: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿದೆ. ಇದನ್ನೂ ಓದಿ: ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ…

    Read More
    ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಸಾವು

    ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಸಾವು

    ಬೆಳಗಾವಿ,ಜ 29: ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು,ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಉಡುಪಿ ಮೂಲದ ಕಮಲಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು ಅನ್ನುವ ಮಾಹಿತಿ ಲಭ್ಯವಾಗಿದೆ. ರವಿವಾರ…

      Read More
      ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

      ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

      ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ (Vijayapura) ಭೂಕಂಪನದ (Earthquake) ಅನುಭವ ಆಗಿದೆ. ಭಾನುವಾರ ತಡರಾತ್ರಿ ಎರಡು ಬಾರಿ ಭೂಕಂಪನ ಸಂಭವಿಸಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ವಿಜಯಪುರ ನಗರ ಮತ್ತು ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿಯಲ್ಲಿ ಭೂಮಿ ಕಂಪಿಸಿದೆ. ಭಾನುವಾರ ರಾತ್ರಿ 12:22 ಹಾಗೂ ರಾತ್ರಿ 1:20ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. 2.9 ತೀವ್ರತೆಯಲ್ಲಿ ಭೂಕಂಪನ ಆಗಿದ್ದು, ಭೂಮಿಯ 5 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಆ್ಯಪ್‌ಗಳಲ್ಲೂ ಭೂಕಂಪನ…

        Read More
        ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

        ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

        ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement)  ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…

          Read More
          ಭಟ್ಕಳದ ವಿಚ್ಛೇದಿತ ಮಹಿಳೆ ಶಂಕಿತ ಉಗ್ರನ ಜೊತೆ ಲಿಂಕ್‌ - ಲವ್‌ ಕಹಾನಿ

          ಭಟ್ಕಳದ ವಿಚ್ಛೇದಿತ ಮಹಿಳೆ ಶಂಕಿತ ಉಗ್ರನ ಜೊತೆ ಲಿಂಕ್‌ – ಲವ್‌ ಕಹಾನಿ

          ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ (Bhatkal) ಮಹಿಳೆಯೊಬ್ಬಳನ್ನ ತನಿಖೆ ನಡೆಸಿದೆ. ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ (Mumbai) ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಐಸಿಸ್ (ISIS) ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ನಾಸಿಕ್‌ನ ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ…

            Read More
            ಬಾಗಲಕೋಟೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

            ಬಾಗಲಕೋಟೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

            ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ…

              Read More
              ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

              ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

              ದಾವಣಗೆರೆ, ಜ.25: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ (Davanagere) ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆ‌ಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ…

                Read More
                ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್

                ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್

                ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ…

                  Read More
                  ಚಳ್ಳಕೆರೆ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

                  ಚಳ್ಳಕೆರೆ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

                  ಚಿತ್ರದುರ್ಗ, ಜ.25: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ದುರ್ಘಟನೆ (Accident) ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ…

                    Read More
                    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಹಳೆ ಪಿಂಚಣಿ ಯೋಜನೆ ಜಾರಿ

                    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಹಳೆ ಪಿಂಚಣಿ ಯೋಜನೆ ಜಾರಿ

                    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಈ ಕುರಿತು ಎಕ್ಸ್ ನಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ…

                      Read More