![ದಕ್ಷಿಣ ಕನ್ನಡ : ಮೊಸರು ಕುಡಿಕೆ ಉತ್ಸವ ಹಿನ್ನೆಲೆ ಮದ್ಯದಂಗಡಿ ಬಂದ್ ; ಜಿಲ್ಲಾಧಿಕಾರಿ ಆದೇಶ](https://nimmondige24.com/wp-content/uploads/2023/09/sergio-alves-santos-PeDrafNlY2Y-unsplash.jpeg)
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್ಶಾಪ್/ಬಾರ್ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.