ಮಂಗಳೂರು: ಪುಶು ಆಹಾರದ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಇವತ್ತು ರೈತರ ಹಾಗೂ ಇತರ ವರ್ಗದ ಜನರು ತೊಂದರೆಗೆ ಒಳಗಾಗಿದ್ದಾರೆ . ಇದರಿಂದ ಹಾಲು ಹಾಗೂ ಇತರ ಉತ್ಪನ್ನಗಳ ಬೆಲೆ ಏರಿಕೆ ಆಗುತ್ತದೆ ಎಂಬ ಗಂಭೀರ ವಿಷಯವನ್ನು ನಿನ್ನೆ ನಡೆದ ಪರಿಷತ್ತಿನ ಸದನದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪ್ರಸ್ತಾಪಿಸಿದರು.
ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ
ಕರಾವಳಿ ಜಿಲ್ಲೆಗಳು ಇತರ ಜಿಲ್ಲೆಗಳಿಗಿಂತ ಹೆಚ್ಚಿನ ಪಶು ಆಹಾರಗಳನ್ನು ಉಪಯೋಗಿಸುತ್ತಿರುವ ಕಾರಣದಿಂದಾಗಿ ಉಭಯ ಜಿಲ್ಲೆಗಳಲ್ಲಿ ಬಹಳಷ್ಟು ಸಮಸ್ಯೆ ಉಂಟಾಗುತ್ತಿದೆ ಈ ಬಗ್ಗೆ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಇದನ್ನೂ ಓದಿ: ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!
ಪಶು ಆಹಾರ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ಪಶು ಆಹಾರ ಉತ್ಪನ್ನಗಳ ಬೆಲೆಯನ್ನು ಕಡಿಮೆಗೊಳಿಸಿದರೆ ಹಾಲಿನ ಉತ್ಪನ್ನಗಳ ಬೆಲೆ ಕಡಿಮೆಗೊಳಿಸಬಹುದು ಎಂದು ಅವರು ಸಲಹೆ ನೀಡಿದರು.