Breaking News

ಇಚ್ಲಂಪಾಡಿಯ ಯುವಕ ಕಾಣೆ: ದೂರು ದಾಖಲು

Share News

ಕಡಬ:  ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ, ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ ನೆಲ್ಯಾಡಿಗೆ ಬರ ಹೇಳಿದ್ದು ಅವನು ಸಂಜೆ 6 ಗಂಟೆಗೆ ನೆಲ್ಯಾಡಿಗೆ ಬಂದು ಹಣ ಪಡೆದು ಹೋಗಿರುವುದಾಗಿ ಮೇಸ್ತ್ರಿ ತಿಳಿಸಿರುತ್ತಾರೆ.

ಸಾಲಬಾಧೆಗೆ ಮನನೊಂದು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ಬಳಿಕ ಮಗನ ಬಗ್ಗೆ ಸಂಬಂಧಿಕರ ಮನೆಯಲ್ಲಿ ಹಾಗೂ ಇತರ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ. ಆದುದರಿಂದ ಕಾಣೆಯಾದ ನನ್ನ ಮಗನನ್ನು ಪತ್ತೆ ಹಚ್ಚಿ ಕೊಡುವಂತೆ ಬಗ್ಗೆ ಜೋಜು ಜೋಸೆಫ್ ಅವರ ತಂದೆ ಟಿ.ವಿ.ಜೋಸೆಫ್‌ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪಾರಿವಾಳವನ್ನು ರಕ್ಷಿಸಲು ಹೋದ ಯುವಕರು ತೊಂದರೆಗೆ ಒಳಗಾದ ಮಂಗಳೂರಿನ ವಿಡಿಯೋ!


Share News

Leave a Reply

Your email address will not be published. Required fields are marked *