Breaking News

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 30 ಉದ್ಯಮಿಗಳ ಮನೆ ಮತ್ತು ಕಚೇರಿಗಳಿಗೆ ಐಟಿ ದಾಳಿ!

Share News

ಬೆಂಗಳೂರು: ಬೆಂಗಳೂರಿನ (Bengaluru) ಉದ್ಯಮಿಗಳಿಗೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ಶಾಕ್‌ ನೀಡಿದೆ. ನಗರದ 30 ಕಡೆಗಳಲ್ಲಿ ದಾಳಿ ನಡೆಸಿರುವ ಐಟಿ (IT Raid) ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು!

ಚಿನ್ನದ ಅಂಗಡಿಗಳು, ಮೆಡಿಕಲ್‌ ಶಾಪ್‌ಗಳು, ಆಸ್ಪತ್ರೆಗಳ ಮಾಲೀಕರ ಮನೆ ಹಾಗೂ ಉದ್ಯಮಿಗಳ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚರಾಸ್ತಿ ಹಾಗೂ ಸ್ಥಿರಾಸ್ತಿ ವರಮಾನದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. ಒಂದೊಂದು ತಂಡದಲ್ಲಿ 5 ರಿಂದ 6 ಮಂದಿ ಅಧಿಕಾರಿಗಳಿದ್ದಾರೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರ ಬಂಧನ!

ತೆರಿಗೆ ವಂಚನೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಾವೇರಿ ಥಿಯೇಟರ್ ಬಳಿಯಿರುವ ಚಿನ್ನದ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶಾಂತಿನಗರದಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೂ ರೇಡ್‌ ನಡೆದಿದೆ.

ಹುಟ್ಟಿ ಹರಿಯುವ ಪ್ರದೇಶದಿಂದ ಸಮುದ್ರ ಸೇರುವ ತನಕದ ಕಾವೇರಿ ನದಿಯ ಅದ್ಭುತ ದೃಶ್ಯ!


Share News

Leave a Reply

Your email address will not be published. Required fields are marked *