Breaking News

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವ್ಯಕ್ತಿ ಸಾವು ; ಓರ್ವನಿಗೆ ಗಾಯ !

Share News

ಕಡಬ(ದಕ್ಷಿಣಕನ್ನಡ) : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಡಬದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬದ ಕಾರ ಸಮೀಪದ ಕುಚೋಳಿ ನಿವಾಸಿ ಅಮೃತ ಗೌಡ (63) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುಧಾ ಮೂರ್ತಿ ಹೆಸರು ಬಳಸಿ ವಂಚನೆ ; ಇಬ್ಬರು ಯುವತಿಯರ ವಿರುದ್ಧ ದೂರು ದಾಖಲು!

ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಸುಬ್ರಹ್ಮಣ್ಯ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮನೆಗೆ ಹೊರಟಿದ್ದ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಕಡಬ ಪೇಟೆಯ ಸಮೀಪದ ತಿರುವಿನಲ್ಲಿ ಬಸ್‌ನಿಂದ ರಸ್ತೆಗೆಸೆಯಲ್ಪಟ್ಟಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುದ್ಧ ಗಾಣದ ಎಣ್ಣೆ ತೆಗೆಯುವ ಕಟಪಾಡಿಯ ಮಿಲ್!


Share News

Leave a Reply

Your email address will not be published. Required fields are marked *