Breaking News

ಕಾರ್ಕಳ : ಬಸ್ ಮತ್ತು ಕಾರು ನಡುವೆ ಅಪಘಾತ ; ಹಲವರಿಗೆ ಗಾಯ!

Share News

ಕಾರ್ಕಳ : ಖಾಸಾಗಿ ಬಸ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ.

ಇದನ್ನೂ ಓದಿ: ಉಡುಪಿ: ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ನವಜೋಡಿಗಳ ಕೋಳಿ ಅಂಕ ಪೈಟ್..!

ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.‌ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *