Breaking News

ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

Share News

ಹುಬ್ಬಳ್ಳಿ, (ಸೆಪ್ಟೆಂಬರ್ 28): ತನ್ನ ಮಗಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಯುವಕನೋರ್ವನನ್ನು ಕೊಚ್ಚಿ ಕೊಂದ 24 ಗಂಟೆಯೊಳಗೆ ಆರೋಪಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಪರಸಪ್ಪ‌ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಪರಸಪ್ಪ ನಿನ್ನೆ(ಸೆಪ್ಟೆಂಬರ್ 27) ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮೌಲಾಲಿ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ. ಇದೀಗ ಪರಸಪ್ಪ, ಇಂದು (ಸೆ.29) ಹುಬ್ಬಳ್ಳಿ ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

ಮೌಲಾಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ತಾಲೂಕಿನ ಮರಗಡಿ ನಿವಾಸಿಯಾಗಿದ್ದು, ಗಾರೆ ಕೆಲಸದ ನಿಮಿತ್ತವಾಗಿ ಹುಬ್ಬಳ್ಳಿಗೆ ಬಂದಿದ್ದ. ಮತ್ತೊಂದೆಡೆ ಆತ್ಮಹತ್ಯೆ ಮಾಡಿಕೊಂಡಿರುವ ಪರಸಪ್ಪ ಕುಟುಂಬ ಸಹ ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿತ್ತು. ಹೀಗಾಗಿ ಮೌಲಾಲಿ ಸಹ ಪರಸಪ್ಪನ ಕುಟುಂಬದ ಜೊತೆ ಗಾರೆ ಕೆಲಸ ಮಾಡಿಕೊಂಡಿದ್ದ. ಎಲ್ಲರೂ ನಿರ್ಮಾಣ ಹಂತದಲ್ಲಿ ಕಟ್ಟಡದಲ್ಲಿ ವಾಸವಿದ್ದರು. ಆದ್ರೆ, ಮೌಲಾಲಿ, ಪರಸಪ್ಪ‌ನ ವಿವಾಹಿತ ಮಗಳ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದ. ಇದು ಪರಸಪ್ಪನಿಗೆ ಗೊತ್ತಾಗಿದ್ದು, ಇದರಿಂದ ರೊಚ್ಚಿಗೆದ್ದು ನಿನ್ನೆ(ಬುಧವಾರ) ಅದೇ ನಿರ್ಮಾಣ ಹಂತದ ಕಟ್ಟಡದೊಳಗೆ ಮೌಲಾಲಿಯನ್ನು ಕೊಚ್ಚಿ ಕೊಂದಿದ್ದ. ವಿಷಯ ತಿಳಿದು ಸ್ಥಳಕ್ಕೆ ಗೋಕುಲ ರೋಡ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಆದ್ರೆ, ಆರೋಪಿ ಸಹ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಉಳ್ಳಾಲ : ಬಲೆಗೆ ಬಿದ್ದ 75 ಕೆಜಿ ತೂಕದ ದೊಡ್ಡ ಗಾತ್ರದ ಪಿಲಿ ತೊರಕೆ ಮೀನು


Share News

Leave a Reply

Your email address will not be published. Required fields are marked *