Breaking News

ಮೂಡಬಿದಿರೆ: ಭೀಕರ ಅಪಘಾತಕ್ಕೆ ಯುವಕ ಬಲಿ

Share News

ಮೂಡಬಿದಿರೆ, ಡಿ 7: ಹುಟ್ಟು ಹಬ್ಬದ ಹಿಂದಿನ ದಿನವೇ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.

ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ

ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಆಸು ನೀಗಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

ಇನ್ನು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ಪ್ರದೀಪ್ ಅವರು ಇಂದು ತನ್ನ 39ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *