ದಾವಣಗೆರೆ, ಜ.25: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ (Davanagere) ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ…
ಪುತ್ತೂರು: ಲಿವರ್ ವೈಫಲ್ಯದಿಂದ ಆಸ್ಪತ್ರೆಯಲ್ಲಿದ್ದ ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ತಂಗಿ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಲಿವರ್ ಹಾನಿಗೀಡಾಗಿ ಬದುಕುಳಿಸುವ ಎಲ್ಲ ಪ್ರಯತ್ನದ ನಡಯವೆಯೂ ಅವರು ಮೃತರಾಗಿದ್ದಾರೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ ಜಾಂಡೀಸ್ ಜ್ವರ ಬಾಧಿಸಿದ್ದ ಐಶ್ವರ್ಯ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ…
ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ…
ಚಿತ್ರದುರ್ಗ, ಜ.25: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ದುರ್ಘಟನೆ (Accident) ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ…
ನವದೆಹಲಿ: ಆರು ಬಾರಿ ವಿಶ್ವ ಚಾಂಪಿಯನ್ ಹಾಗೂ 2012 ರ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ (Mary Kom) ಬಾಕ್ಸಿಂಗ್ಗೆ (Boxing) ನಿವೃತ್ತಿ ಘೋಷಿಸಿದ್ದಾರೆ. ಇಂಟರ್ ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (IBA) ನಿಯಮದ ಪ್ರಕಾರ, 40 ವರ್ಷ ವಯಸ್ಸಿನವರೆಗೆ ಮಾತ್ರ ಪುರುಷ ಮತ್ತು ಮಹಿಳಾ ಬಾಕ್ಸರ್ಗಳಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಆದರೆ ಇದೀಗ ಮೇರಿಯವರಿಗೆ 41 ವರ್ಷ ವಯಸ್ಸಾಗಿದ್ದರಿಂದ ಬುಧವಾರ ನಿವೃತ್ತಿ (Retirement) ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಈ ಕುರಿತು ಎಕ್ಸ್ ನಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ…
ಕೋಲ್ಕತ್ತಾ: ಬುಧವಾರ ಬುರ್ದ್ವಾನ್ನಲ್ಲಿ (Burdwan) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರ ಬೆಂಗಾವಲು ವಾಹನದ ಎದುರು ಏಕಾಏಕಿ ಕಾರೊಂದು ಬಂದ ಪರಿಣಾಮ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಕಾರಿನಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಬುರ್ದ್ವಾನ್ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮುಖ್ಯಮಂತ್ರಿಯ ತಲೆಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು…
ಗದಗ, ಜ.24: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ(Accident) ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್ (38) ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೊಪ್ಪಳದ ಭಾಗ್ಯನಗರದ ನಿವಸಿ ಗೀತಾ ಕಲಾಲ್ (40) ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ನಾಳೆ ಹುಣ್ಣಿಮೆ ಇರುವ ಹಿನ್ನಲೆ ಸಹೋದರಿಯರು ಯಲ್ಲಮ್ಮನ ಗುಡ್ಡಕ್ಕೆ…
ಮಂಗಳೂರು, ಜ 24: “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು…
ಮಂಗಳೂರು ಜನವರಿ 24: ಬೈಕ್ ಸ್ಕಿಡ್ ಆಗಿ ರಸ್ತೆ ಡಿವೈಡರ್ ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಾವರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬಾಗಲಕೋಟೆ ಜಿಲ್ಲೆಯ ಸುರೇಶ್ (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ…