Breaking News

ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

Share News

ಪುತ್ತೂರು, ಡಿ 14 : ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಕಲಾಪದ ವೇಳೆ ಒಳ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು..!

ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!

ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್‌ ಕಲ್ಲರ್ಪೆ ಹೈದರಾಬಾದ್‌ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್‌ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *