![ಗೆಲ್ಲುವ ಹೊಸ ಮುಖಗಳ ಶೋಧಕ್ಕಾಗಿ ರಾಹುಲ್ ಗಾಂಧಿ ಗಂಭೀರ ಸೂಚನೆ . ತುಮಕೂರಿಗೆ ನಿಕೇತ್ ರಾಜ್ ಮೌರ್ಯ ಬಹುತೇಕ ಖಚಿತ?](https://nimmondige24.com/wp-content/uploads/2024/01/145.jpg)
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಲವಾರು ಹೊಸ ಮುಖಗಳಿಗೆ ಆದ್ಯತೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೊಸ ಮುಖಗಳನ್ನು ಪತ್ತೆ ಹಚ್ಚುವಂತೆ ಕಾಂಗ್ರೆಸ್ ಮುಖಂಡರುಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಂಟ್ವಾಳ : ವಗ್ಗ ಬಳಿ ಕೆಎಸ್ಆರ್ಟಿಸಿ ಬಸ್ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ..!
ಈ ಬೆಳವಣಿಗೆಯ ನಡುವೆ ಕಾಂಗ್ರೆಸ್ ಉಸ್ತುವಾರಿಗಳು ಹಾಗೂ ಕಾಂಗ್ರೆಸ್ ನಾಯಕರುಗಳು ಹಲವಾರು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೇಡಿಕೊಳ್ಳುತ್ತಿದ್ದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ; ತರಕಾರಿ ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ
ಹೈಕಮಾಂಡ್ ಮೂಲಕ ಪ್ರಕಾರ ತುಮಕೂರಿನಲ್ಲಿ ಯುವ ನಾಯಕ ನಿಕೇತ್ ರಾಜ್ ಮೌರ್ಯ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಎಂದು ತಿಳಿದುಬಂದಿದೆ.
ಹೊಸ ಮುಖಗಳಿಗೆ ಆದ್ಯತೆ ನೀಡುವ ಕ್ಷೇತ್ರಗಳಲ್ಲಿ ತುಮಕೂರು ಒಂದು ಎಂದು ಹೈಕಮಾಂಡ್ ಮೂಲಗಳು ಸ್ಪಷ್ಟಪಡಿಸಿವೆ.
ಇದರಿಂದ ತುಮಕೂರಿನಲ್ಲಿ ಹೊಸ ಮುಖದ ಪ್ರಯೋಗದ ಸಾಧ್ಯತೆ ಇದೆ ಎನ್ನಲಾಗುತ್ತಿದೆ.