Breaking News

ನ್ಯೂಇಯರ್ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆ ; ಓರ್ವನ ಮೂಗು ಕಚ್ಚಿ ತುಂಡರಿಸಿದ ಮತ್ತೋರ್ವ..!

Share News

ಬೆಳ್ತಂಗಡಿ ಜನವರಿ 01: ನ್ಯೂ ಇಯರ್ ಪಾರ್ಟಿಯಲ್ಲಿ ಯುವಕರ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ನಡೆದಿದೆ. ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28) ಎಂಬವರು ಮೂಗು ತುಂಡರಿಸಲ್ಪಟ್ಟಿದೆ. ಕಚ್ಚಿ ಮೂಗು ತುಂಡರಿಸಿದ ಯುವಕನನ್ನು ರಾಕೇಶ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮೂಲತಃ ಮೂಡಿಗೆರೆ ತಾಲೂಕಿನವನಾಗಿರುವ ರಾಕೇಶ್, ಪ್ರಸಕ್ತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಶುಭಾರಂಭ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂದರ್ಭ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ದೀಕ್ಷಿತ್ ಮೂಗನ್ನು ರಾಕೇಶ್ ಬಲವಾಗಿ ಕಚ್ಚಿ ತುಂಡರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಕ್ಕೆ ‘ಕರಾವಳಿ’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್

ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ರಿಗೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *