Breaking News

ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

Share News

ಸುಳ್ಯ, ಡಿ 15: ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಎಲಿಮಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಇಂದು ಬೆಳಿಗ್ಗೆ6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಳ್ಳಾಲ : ಶಾಲೆ ಸಮೀಪ ಮದ್ದು ಮಧ್ಯ ಸೇವನೆ ಪ್ರಶ್ನಿಸಿದಕ್ಕೆ ಚೂರಿಯಿಂದ ಇರಿದು ಯುವಕನ ಹತ್ಯೆ.!

ಈತ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿದ್ದ ಈತ ಸಾವಿನ ದವಡೆಯಿಂದ ಪಾರಾಗಿದ್ದ. ಈತನ ಚಿಕಿತ್ಸೆಗಾಗಿ ನೂರಾರು ದಾನಿಗಳು ಹಣಕಾಸು ನೆರವು ನೀಡಿದ್ದರು.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *