ಬಂಟ್ವಾಳ, ಜ 30: ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸೋಮವಾರ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ…
ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಹೊರದೇಶದಲ್ಲಿ ಕೆಲಸದಲ್ಲಿದ್ದು ಊರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿರುವ ಗಿಲ್ಬರ್ಟ್ ಕಾರ್ಲೊ (78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೊ (70) ಸಾವನ್ನಪ್ಪಿದ ದಂಪತಿ. ಕಳೆದ ಒಂದೂವರೆ ವರ್ಷಗಳ ಹಿಂದೆ ಅವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ ನಡೆದಿತ್ತು. ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಹೆಣ್ಣುಮಕ್ಕಳು. ಇವರಲ್ಲಿ ಇಬ್ಬರು…
ಬಂಟ್ವಾಳ,ಜ 27: ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ.23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್ ಶೆಟ್ಟಿ ಎಂಬವರ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ…
ಬಂಟ್ವಾಳ, ಜ 22: ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),…
ಬಂಟ್ವಾಳ ಜನವರಿ 22: ಬಂಟ್ವಾಳದಲ್ಲಿ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ಮಧ್ಯೆ ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಮುನ್ನಾದಿನ ರಾತ್ರಿ ಶ್ರೀ ಸತ್ಯನಾರಾಯಣ ಪೂಜೆಯನ್ನು ರಾಮಭಕ್ತ ಪುರಸಭೆ ಮಾಜಿ ಸದಸ್ಯ ಎ.ಗೋವಿಂದ ಪ್ರಭು ನೇತೃತ್ವದಲ್ಲಿ ಭಾನುವಾರ ರಾತ್ರಿ ನಡೆಯಿತು. ಪುರಸಭೆಯ ಹಿರಿಯ ಸದಸ್ಯ ಹಾಗೂ ಅಯೋಧ್ಯೆ ಕರಸೇವೆಯಲ್ಲಿ ಭಾಗಿಯಾಗಿದ್ದ ಗೋವಿಂದ ಪ್ರಭು,ನೇತ್ರಾವತಿ ನದಿಯ ನೀರಿನ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನಡೆಸಿದ್ದು ವಿಶೇಷ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ…
ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕನಾಗಿದ್ದಾನೆ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ . ಕೂಡಲೇ…
ಬಂಟ್ವಾಳ, ಜ 13:ಹೆಂಡತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತಿ, ಆಕೆಗೆ ಹಲ್ಲೆ ನಡೆಸಿ 33 ಪವನ್ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಘಟನೆಯ ಕುರಿತು ಪುದು ಗ್ರಾಮ ನಿವಾಸಿ ಬಿ.ಬಿ.ಫಾತಿಮಾ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ…
ಬಂಟ್ವಾಳ, ಜ 10: ಕೆಎಸ್ಆರ್ಟಿಸಿ ಬಸ್ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ದಲ್ಲಿ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ಪಲ್ಲವಿ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ.ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಿದೆ. ಇದನ್ನೂ ಓದಿ: ಹೆತ್ತ ನಾಲ್ಕು ವರ್ಷದ ತನ್ನ ಮಗುವನ್ನೇ ಕೊಂದು…
ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಇದನ್ನೂ ಓದಿ: ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್; ಒರ್ವ ಸಿಬ್ಬಂದಿಗೆ ಗಾಯ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ. ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ…
ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ…