ಬೆಳ್ತಂಗಡಿ ಜನವರಿ 26: ಇಂದು ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ…
ಧರ್ಮಸ್ಥಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಲಯ ಅರಣ್ಯಾಧಿಕಾರಿಗಳನ್ನು ನಿಂದನಾತ್ಮಕ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಲಿಂಕ್ಡ್ಇನ್ನಲ್ಲಿ ಲೇ ಆಫ್; 668 ಉದ್ಯೋಗಿಗಳು ಕೆಲಸದಿಂದ…