ಮಂಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹಾಗೂ ಮಂಗಳೂರು ಲೋಕಸಭೆಗೆ ಎಂಎಲ್ಸಿ ಹರೀಶ್ ಕುಮಾರ್ ಹೆಸರು ಕಾಂಗ್ರೆಸ್ ಹೈಕಮಾಂಡಿನ ಗಂಭೀರ ಪರಿಶೀಲನೆಯಲ್ಲಿದೆ ಎಂದು ತಿಳಿದು ಬಂದಿದೆ. ಜಯಪ್ರಕಾಶ್ ಹೆಗ್ಡೆ ಈ ಮೊದಲು ಸಚಿವರಾಗಿ, ಸಂಸದರಾಗಿ ಜನಪ್ರಿಯತೆ ಗಳಿಸಿಕೊಂಡಿದ್ದರು. ಅವರು ಸಿದ್ದರಾಮಯ್ಯನವರ ಆಪ್ತ ವಲಯದಲ್ಲೂ ಗುರುತಿಸಿಕೊಂಡಿದ್ದರು. ತದನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಈಗ ಮತ್ತೆ ಕಾಂಗ್ರೆಸ್ಸಿಗೆ ಮರಳಿ ತರುವ ಪ್ರಯತ್ನ ಸಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿದೆ. ಇನ್ನೊಂದು ಕಡೆಯಲ್ಲಿ…