ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು…
ಪುತ್ತೂರು: ಲಿವರ್ ವೈಫಲ್ಯದಿಂದ ಆಸ್ಪತ್ರೆಯಲ್ಲಿದ್ದ ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ತಂಗಿ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಲಿವರ್ ಹಾನಿಗೀಡಾಗಿ ಬದುಕುಳಿಸುವ ಎಲ್ಲ ಪ್ರಯತ್ನದ ನಡಯವೆಯೂ ಅವರು ಮೃತರಾಗಿದ್ದಾರೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ ಜಾಂಡೀಸ್ ಜ್ವರ ಬಾಧಿಸಿದ್ದ ಐಶ್ವರ್ಯ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ…
ಪುತ್ತೂರು ಜನವರಿ 16: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ; ಪರಾರಿಯಾದ ಚಾಲಕ ಪೊಲೀಸ್ ವಶಕ್ಕೆ..! ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಎಂದು ಗುರುತಿಸಲಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….
ಪುತ್ತೂರು ಜನವರಿ 07: ಪ್ರಥಮ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು ದೀಕ್ಷಾ (16 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಇದನ್ನೂ ಓದಿ: ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.! ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಸ ದೀಕ್ಷಾ ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ…
ಪುತ್ತೂರು, ಜ 03: ಮೈ ಮೇಲೆ ಪ್ರೇತ ಬರುವ ನೆಪವೊಡ್ಡಿ ಎಂದು ಮಹಿಳೆಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದ ಘಟನೆ ಪುತ್ತೂರು ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಎಂಬಲ್ಲಿ ನಡೆಸಿದೆ. ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಿಗ್ಬಂಧನದಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..! ಮೈ ಮೇಲೆ ಪ್ರೇತ ಬರುತ್ತೆ ಎಂದು…
ಪುತ್ತೂರು, ಡಿ 14 : ಹೈದರಾಬಾದ್ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಕಲಾಪದ ವೇಳೆ ಒಳ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು..! ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!…
ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇದನ್ನೂ ಓದಿ: ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ! ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ (68) ಮೃತಪಟ್ಟವರು. ಕೇರಳದ ಅಡೂರಿನಿಂದ ಮುಳ್ಳೇರಿಯಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಬಂದು ಗಾಳಿಮುಖದಲ್ಲಿ ಇಳಿದ ಕುಂಞರಾಮ ಅವರು, ಬಸ್ಸಿನಿಂದ ಇಳಿದು ಬಸ್ಸಿನ ಎದುರು ಭಾಗದ ಮೂಲಕವಾಗಿ ರಸ್ತೆ ದಾಟುತ್ತಿದ್ದ…
ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ…
ಪುತ್ತೂರು ನವೆಂಬರ್ 14: ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: ಕುಮಾರಸ್ವಾಮಿ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ; ಕುಮಾರಸ್ವಾಮಿ ಸ್ಪಷ್ಟನೆ…! ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಸಮಯದಲ್ಲಿ ಅಲ್ಲೇ ಪಕ್ಕದಲ್ಲಿರುವ ನದಿಯೊಂದಕ್ಕೆ ಈಜಾಡಲು ತೆರಳಿದ್ದರು, ಈಜಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ…
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ…