ಬೆಳಗಾವಿ,ಜ 29: ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು,ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಉಡುಪಿ ಮೂಲದ ಕಮಲಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು ಅನ್ನುವ ಮಾಹಿತಿ ಲಭ್ಯವಾಗಿದೆ. ರವಿವಾರ…
ಉಡುಪಿ,ಜ 20: ಬಸ್ ಟೈಮಿಂಗ್ ವಿಚಾರದಲ್ಲಿನ ದ್ವೇಷದಿಂದಾಗಿ ಎರಡು ಬಸ್ ನ ಸಿಬ್ಬಂದಿಗಳ ನಡುವೆ ವಾಗ್ವಾದ, ಚೂರಿ ಇರಿತ ನಡೆದು ಉಡುಪಿ ನಗರ ಠಾಣೆಯಲ್ಲಿ ಇತ್ತಂಡಗಳಿಂದ ದೂರು – ಪ್ರತಿದೂರು ದಾಖಲಾಗಿದೆ. ಟಿ.ಎಂ.ಟಿ ಮತ್ತು ಜೆ.ಎಂ.ಟಿ ಬಸ್ಸಿನ ಮಧ್ಯೆ ಟೈಂ ವಿಚಾರದಲ್ಲಿಈ ಗಲಾಟೆ ,ಹಲ್ಲೆ ನಡೆದಿದ್ದೂ, ಈ ಎರಡೂ ಬಸ್ ಸಿಬ್ಬಂದಿಗಳು ಈ ಗಲಾಟೆಯಲ್ಲಿ ಭಾಗಿಯಾಗಿದ್ದು, ಈ ಹಿಂದೆಯೂ ಟೈಂಮಿಂಗ್ ವಿಚಾರದಲ್ಲಿ ವಿವಾದ ಉಂಟಾಗಿತ್ತು. ಇದನ್ನೂ ಓದಿ: ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ…
ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಉಡುಪಿ : ಕೆಂಡಸೇವೆ ವೇಳೆ ಬೆಂಕಿ ಮೇಲೆ ಆಯತಪ್ಪಿ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ…! ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ…
ಉಡುಪಿ ಜನವರಿ 4: ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಆಯಿಲ್ ತುಂಬಿದ್ದ ಟ್ಯಾಂಕರ್ ಫ್ಲೈಓವರ್ನ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ. ಸ್ಥಳೀಯರ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದ್ದು…
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಒರ್ವ ಸಿಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಈ ದುರ್ಘಟನೆ ನಡೆದಿದೆ. ಮಳಿಗೆಯೊಳಗೆ ವಾರಸುದಾರರಿಲ್ಲದ ರಿವಾಲ್ವರ್ ಪತ್ತೆಯಾಗಿದೆ. ಇದನ್ನೂ ಓದಿ: ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5…
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಕಂಬದಕೋಣೆ ಜಂಕ್ಷನ್ ಸಮೀಪ ಶನಿವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.ಕಾರು ಕಾರವಾರದಿಂದ…
ಉಡುಪಿ: ಚಿತ್ರ-ವಿಚಿತ್ರವಾಗಿ ವೇಷ ಧರಿಸಿ ಬರುವ ಕಳ್ಳರ ಹೆಜ್ಜೆ ಗುರುತು ಪತ್ತೆ ಮಾಡುವುದೇ ಪೊಲೀಸರಿಗೆ ತಲೆನೋವಾಗಿದೆ. ಒಂದು ಕಡೆ ಸೈಬರ್ ಕಳ್ಳರ ಹಾವಳಿಯಾದರೆ ಮತ್ತೊಂದೆಡೆ ಕೆಲ ನಟೋರಿಯಸ್ ಗ್ಯಾಂಗ್ ಸಕ್ರಿಯಗೊಂಡಿದೆ. ಸದ್ಯ ಉಡುಪಿಯಲ್ಲಿ ನಟೋರಿಯಸ್ ಬನಿಯನ್ ಗ್ಯಾಂಗ್ ಜನರ ಆತಂಕವನ್ನು ಹೆಚ್ಚು ಮಾಡಿದೆ. ಇದನ್ನೂ ಓದಿ: ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ..! ಬನಿಯನ್ ಹಾಗೂ ಚಡ್ಡಿ ಧರಿಸಿ ಬರುವ ಈ ಕಳ್ಳರು ಮೈಗೆ ಎಣ್ಣೆ ಹಚ್ಚಿಕೊಂಡು ಫೀಲ್ಡಿಗಿಳಿಯುತ್ತಾರೆ. ಎಲ್ಲರೂ ಗಾಢ ನಿದ್ರೆ ಜಾರುವ ಸಮಯಕ್ಕೆ…
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆದರೆ ಡಿಸೆಂಬರ್ 19 ರಂದು ಬೆಳಗ್ಗೆ ಸಮುದ್ರದಲ್ಲಿ ಮಲ್ಪೆಯಿಂದ 26 ಮಾರು ಆಳದಲ್ಲಿ ದೋಣಿ ಮುಳುಗಡೆಗೊಂಡಿದೆ. ಇದನ್ನೂ ಓದಿ: ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ..! ಬೆಳಗ್ಗೆ 6.30ರ ಸುಮಾರಿಗೆ…
ಉಡುಪಿ : ಉಡುಪಿ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜ್ ಪ್ರಾಧ್ಯಾಪಕ ಡಾ.ಅಲೆಕ್ಸ್ ಜೋಸೆಫ್(47) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್ ಆದ ಕಮಿನ್ಸ್..! ಮಂಗಳವಾರ ಬೆಳಗ್ಗೆ 11.50ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಜೋಸೆಫ್ ಅವರು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ನ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅದೇ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಎಂಜೆಲ್ ಟ್ರೀಸಾ ಅಲೆಕ್ಸ್ ಜೊತೆ ಬೆಳಗ್ಗೆ 8 ಗಂಟೆಗೆ ಕಾಲೇಜಿಗೆ ತೆರಳಿದ್ದರು. ಇದನ್ನೂ…
ಉಡುಪಿ, ಡಿಸೆಂಬರ್ 19 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್ ಆದ ಕಮಿನ್ಸ್..! 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ…