Breaking News

ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ!

Share News

ಉಪ್ಪಿನಂಗಡಿ: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್‌ನಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್…!

ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: 14 ಸಾವಿರ ಉದ್ಯೋಗಿಗಳನ್ನು ವಜಾ ಗೊಳಿಸಿದ ನೋಕಿಯಾ!

ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದ್ರೂ ಲಾರಿ ,ಸರಕಿನ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ . ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ ಉಂಟಾಗಿತ್ತು ಎಂದು ವರದಿಯಾಗಿದೆ.

WATCH VIDEO ON YOUTUBE: ಪಕ್ಷಿಗಳ ಅದ್ಭುತವಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ!


Share News

Leave a Reply

Your email address will not be published. Required fields are marked *