![ಉಪ್ಪಿನಂಗಡಿ :ಆಟೋ ರಿಕ್ಷಾ ಪಲ್ಟಿ, ಚಾಲಕ ಸಾವು](https://nimmondige24.com/wp-content/uploads/2023/10/26.jpg)
ಕಡಬ: ರಾಮಕುಂಜ ಮೂಲದ ಆಟೋ ರಿಕ್ಷಾ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಬಳಿ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!
ರಾಮಕುಂಜ ಗ್ರಾಮದ ಇರ್ಕಿ ನಿವಾಸಿ ಪದ್ಮಯ್ಯ ಮಡಿವಾಳ ಅವರ ಪುತ್ರ ದಿನೇಶ್ (40) ಮೃತಪಟ್ಟವರು. ಅವರು ಬಜತ್ತೂರು ಕಡೆ ಬಾಡಿಗೆಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಬಜತ್ತೂರು ಗ್ರಾಮದ ಪೆರಿಯಡ್ಕ-ಅಯೋಧ್ಯಾ ನಗರದಲ್ಲಿ ಆಟೋ ಸ್ಕಿಡ್ ಆಗಿ ಪಲ್ಟಿಯಾಗಿದೆ.
ಸಾಲಬಾಧೆಗೆ ಮನನೊಂದು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!
ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ರಾಮಕುಂಜ ಜಾತ್ರೋತ್ಸವ ಸಂದರ್ಭ ದೇವರ ಹಾಗೂ ದೈವಗಳ ಎದುರು ದೀವಟಿಕೆ ಹಿಡಿಯುವ ಸೇವೆ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.