Breaking News

ಉಪ್ಪಿನಂಗಡಿ :ಆಟೋ ರಿಕ್ಷಾ ಪಲ್ಟಿ, ಚಾಲಕ ಸಾವು

Share News

ಕಡಬ: ರಾಮಕುಂಜ ಮೂಲದ ಆಟೋ ರಿಕ್ಷಾ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಬಳಿ ಸ್ಕಿಡ್‌ ಆಗಿ ಪಲ್ಟಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

ರಾಮಕುಂಜ ಗ್ರಾಮದ ಇರ್ಕಿ ನಿವಾಸಿ ಪದ್ಮಯ್ಯ ಮಡಿವಾಳ ಅವರ ಪುತ್ರ ದಿನೇಶ್‌ (40) ಮೃತಪಟ್ಟವರು. ಅವರು ಬಜತ್ತೂರು ಕಡೆ ಬಾಡಿಗೆಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಬಜತ್ತೂರು ಗ್ರಾಮದ ಪೆರಿಯಡ್ಕ-ಅಯೋಧ್ಯಾ ನಗರದಲ್ಲಿ ಆಟೋ ಸ್ಕಿಡ್‌ ಆಗಿ ಪಲ್ಟಿಯಾಗಿದೆ.

ಸಾಲಬಾಧೆಗೆ ಮನನೊಂದು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ರಾಮಕುಂಜ ಜಾತ್ರೋತ್ಸವ ಸಂದರ್ಭ ದೇವರ ಹಾಗೂ ದೈವಗಳ ಎದುರು ದೀವಟಿಕೆ ಹಿಡಿಯುವ ಸೇವೆ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪಾರಿವಾಳವನ್ನು ರಕ್ಷಿಸಲು ಹೋದ ಯುವಕರು ತೊಂದರೆಗೆ ಒಳಗಾದ ಮಂಗಳೂರಿನ ವಿಡಿಯೋ!


Share News

Leave a Reply

Your email address will not be published. Required fields are marked *