Breaking News

ಬುದ್ಧಿವಾದ ಹೇಳಿದ ಎಎಸ್‍ಐ ಬೈಕ್‍ಗೆ ಬೆಂಕಿ ಹಚ್ಚಿದ ಭೂಪ!

Share News

ಚಿಕ್ಕಬಳ್ಳಾಪುರ: ಅಣ್ಣ-ತಮ್ಮಂದಿರ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ರಂಪಾಟ ಮಾಡ್ತಿದ್ದ ಅಸಾಮಿಗೆ ಎಎಸ್‍ಐ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು. ಪೊಲೀಸಪ್ಪನ ಫಾಲೋ ಮಾಡಿಕೊಂಡು ಹೋಗಿ ಮನೆಯ ಮುಂದೆ ನಿಲ್ಲಿಸಿದ್ದ ಹೊಸ ಸ್ಕೂಟಿಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ.

ನಾಳೆ ಸ್ಥಬ್ಧವಾಗಲಿದೆ ಕರ್ನಾಟಕ ; ಇಂದು ರಾತ್ರಿಯಿಂದಲೆ ತಮಿಳುನಾಡಿಗೆ ಬಸ್ ಸಂಚಾರ ಬಂದ್!

ಗುಡಿಬಂಡೆ ನಗರದ ಹಣ್ಣಿನ ವ್ಯಾಪಾರಿ ಖಲೀಂ ಉಲ್ಲಾ ತನ್ನ ಸಹೋದರರ ಜೊತೆ ಗಲಾಟೆ ಮಾಡಿಕೊಂಡು ಆಸ್ಪತ್ರೆಗೆ ಆಗಮಿಸಿದ್ದು ಆಸ್ಪತ್ರೆಯಲ್ಲಿ ವಿನಾಕಾರಣ ಕೂಗಾಟ ನಡೆಸಿ ರಂಪಾಟ ಮಾಡ್ತಿದ್ದ. ವಿಷಯ ತಿಳಿದು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಎಎಸ್‍ಐ ನಂಜುಂಡ ಶರ್ಮಾ ಸೇರಿ ಇತರೆ ಪೊಲೀಸರು ಹೋಗಿ ಅಸಾಮಿ ಖಲೀಂ ಉಲ್ಲಾಗೆ ಬೈದು ಬುದ್ಧಿವಾದ ಹೇಳಿದ್ದರು.

ಅಚ್ಚರಿ ಘಟನೆ ; ಮಗಳ ಮದುವೆಗೆಂದು ಹಣ ಉಳಿಸಿ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 18 ಲಕ್ಷ ತಿಂದು ಹಾಕಿದ ಗೆದ್ದಲು!

ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋದ ಖಲೀಂ ಉಲ್ಲಾ ಮತ್ತೆ ಸಹೋದರರ ಮನೆಯ ಬಳಿ ಇದ್ದ ಕಾರು ಗಾಜು ಹೊಡೆದು ಬೆಂಕಿ ಹಚ್ಚಲು ಮುಂದಾಗಿದ್ದ. ಮತ್ತೆ ಮನೆ ಬಳಿ ಹೋದ ಪೊಲೀಸರು ಬೈದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ಜಿದ್ದಿನ ಮೇರೆಗೆ ಮುಂಜಾನೆ ಮನೆಗೆ ತೆರಳಿದ್ದ ಎಎಸ್ ಐ ನಂಜುಂಡ ಶರ್ಮಾರನ್ನ ಫಾಲೋ ಮಾಡಿರುವ ಖಲೀಂಉಲ್ಲಾ ನಂಜುಂಡ ಶರ್ಮಾ ಮನೆ ಮುಂದೆ ನಿಲ್ಲಿಸಿ ಮನೆ ಓಳಭಾಗಕ್ಕೆ ಹೋದ ಕೂಡಲೇ ಹೊಸ ಸ್ಕೂಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಉಳ್ಳಾಲ : ಬಲೆಗೆ ಬಿದ್ದ 75 ಕೆಜಿ ತೂಕದ ದೊಡ್ಡ ಗಾತ್ರದ ಪಿಲಿ ತೊರಕೆ ಮೀನು


Share News

Leave a Reply

Your email address will not be published. Required fields are marked *